ವಿವೇಕ ವಿದ್ಯಾಸಂಸ್ಥೆಯ ವತಿಯಿಂದ ಪ್ರಶಸ್ತಿ ಪುರಸ್ಕೃತ ಸಂಮ್ಮಾನ

DSC_5495  ಸಮಾಜ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಕೊಡಮಾಡುವ 2016-17ನೇ ಸಾಲಿನಲ್ಲಿ ಪ್ರಶಸ್ತಿ ಪುರಸ್ಕೃತರಾದ, ನಿವೃತ್ತ ಅಧ್ಯಾಪಕ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಹಾಗು ಸಾಲಿಗ್ರಾಮ ಮಕ್ಕಳ ಮೇಳದ ಸಂಚಾಲಕರಾದ ಶ್ರೀ ಎಚ್. ಶ್ರೀಧರ ಹಂದೆ ಇವರನ್ನು, ಕೋಟ ವಿವೇಕ ವಿದ್ಯಾಸಂಸ್ಥೆಗಳ ಪರವಾಗಿ ಅವರ ಮನೆಗೆ ಭೇಟಿ ನೀಡಿ ಸಂಸ್ಥೆಗಳ ಮುಖ್ಯಸ್ಥರು ಪ್ರಶಸ್ತಿ ಪುರಸ್ಕೃತರನ್ನು ಶಾಲು ಹೊದಿಸಿ ಹಣ್ಣು ಹಂಪಲು ನೀಡಿ ಗೌರವಿಸಿದರು.

ಇದೇ ಸಂದರ್ಭದಲ್ಲಿ ಸಂಮ್ಮಾನಿತರ ಸಮಾಜಸೇವೆಯನ್ನು ಹಾಗು ಯಕ್ಷಗಾನ ಕ್ಷೇತ್ರಕ್ಕೆ ಸಲ್ಲಿಸಿದ ಸೇವೆಯನ್ನು ಸ್ಮರಿಸಿಕೊಂಡರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಕೆ. ಜಗದೀಶ ನಾವುಡರು, ಮುಖ್ಯೋಪಾಧ್ಯಾಯರಾದ ಶ್ರೀ ಕೆ. ಜಗದೀಶ ಹೊಳ್ಳರು, ಶ್ರೀ ಎಂ.ರಾಮದೇವ ಐತಾಳರು ಉಪಸ್ಥಿತರಿದ್ದರು. ವಿದ್ಯಾಸಂಸ್ಥೆಗಳ ಇನ್ನಿತರ ಅಧ್ಯಾಪಕ ಹಾಗು ಸಿಬ್ಬಂದಿ ವರ್ಗದರವರು ಹಾಜರಿದ್ದರು.

Post comment

Your email address will not be published. Required fields are marked *

Copyright © 2016 Kota Vidya Sangha (R.), All rights reserved. Developed By: CoastalLive.com URL Counter