ವಿವೇಕ ವಿದ್ಯಾಸಂಸ್ಥೆಯ ಇಂಟರ್ಯಾಕ್ಟ್ ಕ್ಲಬ್ಗಳ ಹಾಗು ರೋಟರಿ ಕ್ಲಬ್,ಕೋಟ-ಸಾಲಿಗ್ರಾಮ ಇವುಗಳ ಸಂಯುಕ್ತ ಆಶ್ರಯದಲ್ಲಿ ಪ್ರಧಾನ ಮಂತ್ರಿ ಸ್ವಚ್ಛತಾ ಅಭಿಯಾನದ ಅಂಗವಾಗಿ ತ್ಯಾಜ್ಯ ನಿರ್ವಹಣೆ ಮತ್ತು ಹಸಿರು ಶಿಷ್ಟಾಚಾರ ವಿದ್ಯಾರ್ಥಿ ಜಾಗೃತಿ ಅಭಿಯಾನ ಆ. 3ರಂದು ವಿವೇಕ ವಿದ್ಯಾಸಂಸ್ಥೆಯಲ್ಲಿ ಜರಗಿತು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿ ಉಡುಪಿ ಜಿ.ಪಂ. ಉಪಯೋಜನಾಧಿಕಾರಿ ಸುಧೀರ್ ಕುಮಾರ್ ಮಾತನಾಡಿ, ತ್ಯಾಜ್ಯ ನಿರ್ವಹಣೆಯಲ್ಲಿ ಸಮರ್ಪಕತೆ ಇಲ್ಲವಾದರೆ ಪರಿಸರವು ಸ್ವಚ್ಛತೆಯಿಂದಿರಲು ಅಸಾಧ್ಯ. ಹೀಗಾಗಿ ಜಿಲ್ಲಾಡಳಿತದ ಮೂಲಕ ತ್ಯಾಜ್ಯ ನಿರ್ವಹಣೆ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು ಹಾಗು ವಿದ್ಯಾರ್ಥಿಗಳಿಗೆ ಈ ಕುರಿತು ಮಾಹಿತಿ ನೀಡಿದರು.
ರೋಟರಿ ಕ್ಲಬ್ನ ಅಧ್ಯಕ್ಷ ಶ್ರೀ ವ್ಯಾಸರಾಯ ಆಚಾರ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಲಯ 2ರ ಸಹಾಯಕ ಗವರ್ನರ್ ಶ್ರೀ ರತ್ನಾಕರ ಗುಂಡ್ಮಿ, ಮಾಜಿ ಅಧ್ಯಕ್ಷ ಶ್ರೀ ನರಸಿಂಹ ಪ್ರಭು, ಕಾಲೇಜಿನ ಪ್ರಾಂಶುಪಾಲ ಶ್ರೀ ಕೆ. ಜಗದೀಶ ನಾವಡ, ಪ್ರೌಢಶಾಲೆಗಳ ಮುಖ್ಯಸ್ಥ ಶ್ರೀ ಪಿ. ಶ್ರೀಪತಿ ಹೇರ್ಳೆ, ಶ್ರೀ ಕೆ. ಜಗದೀಶ ಹೊಳ್ಳ ಹಾಗು ಮುಖ್ಯಶಿಕ್ಷಕ ಶ್ರೀ ವೆಂಕಟೇಶ ಉಡುಪ ಮುಂತಾದವರು ಉಪಸ್ಥಿರಿದ್ದರು.
ಕಾಲೇಜಿನ ವಿದ್ಯಾರ್ಥಿ ಅರವಿಂದ್ ಕಾರ್ಯಕ್ರಮ ನಿರೂಪಿಸಿದರು.