• By vjcuser
  • June 9, 2026

ಕೋಟ ವಿವೇಕ ಪದವಿ ಪೂರ್ವ ಕಾಲೇಜಿನಲ್ಲಿ ಸಮಾಜ ಸೇವಾ ಸಂಘ ಉದ್ಘಾಟನೆ ಅವಕಾಶ ಸಿಕ್ಕಾಗ ಸಹಾಯಮಾಡುವ ಮನಸ್ಥಿತಿ ಸೃಷ್ಠಿಸಿಕೊಳ್ಳಿ – ಕೆ ತಾರಾನಾಥ ಹೊಳ್ಳ

ಕೋಟ: ಕೋಟ ವಿವೇಕ ಪದವಿ ಪೂರ್ವ ಕಾಲೇಜಿನ ಈ ಶೈಕ್ಷಣಿಕ ವರ್ಷದ ಸಮಾಜ ಸೇವಾ ಸಂಘದ ಉದ್ಘಾಟನಾ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮವನ್ನು ಗೆಳೆಯರ ಬಳಗ ಕಾರ್ಕಡ ಅಧ್ಯಕ್ಷ ಕೆ.ತಾರಾನಾಥ ಹೊಳ್ಳ ಕಾಲೇಜಿನ ಆವರಣದಲ್ಲಿ ಸಸಿ ನೆಡುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಅಧ್ಯಯನದೊಂದಿಗೆ ಸಾಮಾಜಿಕ ಸೇವೆಯಲ್ಲಿ ಭಾಗವಹಿಸಬೇಕು. ಅವಕಾಶ ಸಿಕ್ಕಾಗ ಇತರರಿಗೆ ಸಹಾಯ ಆಗುವ ಸೇವಾ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಲ್ಲಿ ಮುಂದೆ ಸಮಾಜದಲ್ಲಿ ಉತ್ತಮ ನಾಗರಿಕನಾಗಲು ಸಾಧ್ಯ, ಇದರೊಂದಿಗೆ ಪರಿಸರ ಪ್ರೇಮವನ್ನು ಬೆಳೆಸಿಕೊಂಡು ಅದರ ರಕ್ಷಣಾ ಕಾರ್ಯದಲ್ಲಿ ತೊಡಗಿ ಪರಿಸರ ಸ್ನೇಹಿ ಆಗಬೇಕೆಂದು ಕರೆಯಿತ್ತರು. ಕಾಲೇಜಿನ ಪ್ರಾಂಶುಪಾಲ ಜಗದೀಶ ನಾವಡ ಅತಿಥಿಗಳನ್ನು ಪರಿಚಯಿಸಿ ಸ್ವಾಗತಿಸಿದರು. ಸಮಾಜ ಶಾಸ್ತ್ರ ಉಪನ್ಯಾಸಕ ಅಶೋಕ್ ಕುಮಾರ್ ಶೆಟ್ಟಿ  ಮತ್ತು ಸಮಾಜ ಸೇವಾ ಸಂಘದ ಅಧ್ಯಕ್ಷ ಪವನ್ ಕುಮಾರ ವೇದಿಕೆಯಲ್ಲಿದ್ದರು. ಸಂಘದ ಕಾರ್ಯದರ್ಶಿ ಕುಮಾರಿ  ಕೃಪಾ ವಂದಿಸಿ, ಕುಮಾರಿ ಭೂಮಿಕಾ ಟಿ ಡಿ ನಿರೂಪಿಸಿದರು.  ಸಂಘದ ಸಂಚಾಲಕ  ಕೃಷ್ಣ ಕಾರ್ಯಕ್ರಮ ಸಂಯೋಜಿಸಿದ್ದರು. ಕೋಟ ವಿವೇಕ ಪದವಿ ಪೂರ್ವ ಕಾಲೇಜಿನ ಈ ಶೈಕ್ಷಣಿಕ ವರ್ಷದ ಸಮಾಜ ಸೇವಾ ಸಂಘವನ್ನು ಗೆಳೆಯರ ಬಳಗ ಕಾರ್ಕಡ ಅಧ್ಯಕ್ಷ ಕೆ.ತಾರಾನಾಥ ಹೊಳ್ಳ ಕಾಲೇಜಿನ ಆವರಣದಲ್ಲಿ ಸಸಿ ನೆಡುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲ ಜಗದೀಶ ನಾವಡ, ಸಮಾಜ ಶಾಸ್ತ್ರ ಉಪನ್ಯಾಸಕ ಅಶೋಕ್ ಕುಮಾರ್ ಇದ್ದರು.

Explore More
  • By vjcuser
  • June 9, 2026

ಉಡುಪಿ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಬಾಲಕ ಬಾಲಕಿಯರ ಖೊಖೊ ಪಂದ್ಯಾಟ

ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ. ಕೋಟ ವಿದ್ಯಾಸಂಘ  ರಿ ಕೋಟ, ಮತ್ತು ವಿವೇಕ ವಿದ್ಯಾ ಸಂಸ್ಥೆಗಳ ಸಂಯುಕ್ತಆಶ್ರಯದಲ್ಲಿ ಪದವಿ ಪೂರ್ವ ವಿಭಾಗದ ಬಾಲಕ ಬಾಲಕಿಯರ ಖೊ  ಖೋ ಪಂದ್ಯಾಟದ ಉದ್ಘಾಟನಾ ಸಮಾರಂಭ ಕಾಲೇಜಿನ ಕ್ರೀಡಾಂಗಣದಲ್ಲಿ ಜರುಗಿತು. ಕಾರ್ಯಕ್ರಮದ ಉದ್ಘಾಟಕರಾಗಿ, ಡಾ । ಎಚ್ ,ವಿ ಸೋಮಿಯಾಜಿ, ನಿವೃತ್ತ ಪ್ರಾಂಶುಪಾಲರು ಎಸ್ ಎಂ ಎಸ್ ಪದವಿ ಕಾಲೇಜು ಬ್ರಹ್ಮಾವರ ಇವರು ದೀಪ ಬೆಳಗಿಸಿ ಮಾತನಾಡಿ, ವಿದ್ಯಾರ್ಥಿಗಳು ಉತ್ಸಾಹದಿಂದ, ಕ್ರೀಡಾ ಸ್ಪೂರ್ತಿಯಿಂದ ಆಟೋಟದಲ್ಲಿ ಭಾಗವಹಿಸಬೇಕು. ವಿಶೇಷವಾಗಿ ಖೋ  ಖೋ ಆಟದಿಂದ ವಿದ್ಯಾರ್ಥಿಗಳಲ್ಲಿ ಸಂಘಟಿತ ಶಕ್ತಿ, ಜಾಗರೂಕತೆ, ಮತ್ತು ಚುರುಕುತನವನ್ನು ಹೆಚ್ಚಿಸುವ ಸಾಮರ್ಥ್ಯವಿದೆ. ಕೇವಲ ಗೆಲುವನ್ನ ಅಪೇಕ್ಷಿಸದೆ ಸ್ವಯಂ ಸ್ಫೂರ್ತಿಯಿಂದ ಭಾಗವಹಿಸಬೇಕೆಂದು ಅರುಣಿಮಾ ಸಿನ್ಹಾ ಅವರ ಜೀವನದ ಕಥೆಯನ್ನು ವಿವರಿಸುತ್ತಾ ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೋಟ ವಿದ್ಯಾ ಸಂಘದ ಕಾರ್ಯದರ್ಶಿ ಎಂ ರಾಮದೇವ ಐತಾಳ ವಹಿಸಿದ್ದರು. ವಿದ್ಯಾಸಂಘದ ಸದಸ್ಯರಾದ ಶ್ರೀ ವಸಂತ ಶೆಟ್ಟಿ ಇವರು ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಜಗದೀಶನಾವುಡ ಅತಿಥಿಗಳನ್ನು ಪರಿಚಯಿಸಿ ಸ್ವಾಗತಿಸಿದರು. ಕ್ರೀಡಾಪರಿವೇಕ್ಷಕರಾದ  ಶ್ರೀನವೀನ್ ಚಂದ್ರ ನಾಯಕ್  ಆಂಗ್ಲ ಮಾಧ್ಯಮ ಪ್ರೌಢಶಾಲೆ ಮುಖ್ಯಸ್ಥರಾದ ಶ್ರೀಮತಿ ಪ್ರೀತಿ ರೇಖಾ ಉಪಸ್ಥಿತರಿದ್ದರು. ಶಿಕ್ಷಕಿ ಶ್ರೀಮತಿ ನಳಿನಾಕ್ಷಿ ಪ್ರಾರ್ಥಿಸಿ, ಶ್ರೀ ಪ್ರೇಮಾನಂದ್ ಧನ್ಯವಾದವಿತ್ತರು. ಶ್ರೀ ಚಂದ್ರಶೇಖರ್ ಹೆಚ್ ಕಾರ್ಯಕ್ರಮ ನಿರೂಪಿಸಿದರು. ಅಪರಾಹ್ನ ನಡೆದ ಸಮಾರೋಪ ಸಮಾರಂಭದಲ್ಲಿ ಕೋಟ ವಿದ್ಯಾ ಸಂಘದ ಸದಸ್ಯರಾದ  ಶ್ರೀ ವಸಂತ್ ಶೆಟ್ಟಿ ಇವರು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವೈ ಸದಾರಾಮ ಹೇರ್ಳೆ, ಉಪಾಧ್ಯಕ್ಷರು ವಿವೇಕ ಹಿಂದಿನ ವಿದ್ಯಾರ್ಥಿ ಸಂಘ, ಮತ್ತು ಶ್ರೀ ಸುಬ್ರಾಯ ಆಚಾರ್ ಕೋಟ , ಇವರು  ವಿದ್ಯಾರ್ಥಿಗಳಿಗೆ ಶುಭಹಾರೈಸಿ ವಿಜೇತ ತಂಡಗಳಿಗೆ ಪಾರಿತೋಷಕ ವಿತರಿಸಿದರು. ಹಿರಿಯ ದೈಹಿಕ ಶಿಕ್ಷಣ ಉಪನ್ಯಾಸಕ ಶ್ರೀ ಉದಯ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. ಬಾಲಕರ ಮತ್ತು ಬಾಲಕಿಯರ  ಎರಡೂ ವಿಭಾಗಗಳಲ್ಲಿ ಬ್ರಹ್ಮಾವರ ತಾಲೂಕು ಪ್ರಶಸ್ತಿ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆ ಯಾಗಿದೆ. ಶ್ರೀ ಶಿವಪ್ರಸಾದ್ ಶೆಟ್ಟಿಗಾರ್ ನಿರೂಪಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ಶ್ರೀ ವಿಶ್ವನಾಥ ನಾಯಕ್ ಸಹಕರಿಸಿದರು.

Explore More
  • By vjcuser
  • June 9, 2026

ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲ ಸಂಘದ ವಾರ್ಷಿಕ ಮಹಾಸಭೆ, ಶೈಕ್ಷಣಿಕ ಸಮ್ಮೇಳನ

ಗುಣಮಟ್ಟದ ಶಿಕ್ಷಣದೊಂದಿಗೆ ಶಿಸ್ತಿನ ಶಿಕ್ಷಣ ನೀಡುವತ್ತ ಉಪನ್ಯಾಕರು ಗಮನ ಹರಿಸಿದಲ್ಲಿ ವಿದ್ಯಾರ್ಥಿಗಳೊಂದಿಗೆ ಶಿಕ್ಷಣ ಸಂಸ್ಥೆಗಳೂ ಅಭಿವೃದ್ಧಿ ಹೊಂದುತ್ತವೆ ಎಂದು ಕೋಟ ವಿವೇಕ ವಿದ್ಯಾ ಸಂಘದ ಕಾರ್ಯದರ್ಶಿ ಎಂ.ರಾಮದೇವ ಐತಾಳ ಹೇಳಿದರು. ಕೋಟ ವಿವೇಕ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಬುಧವಾರ ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲ ಸಂಘದ ವಾರ್ಷಿಕ ಮಹಾಸಭೆ, ಶೈಕ್ಷಣಿಕ ಸಮ್ಮೇಳನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರ ಸಂಘದ ಅಧ್ಯಕ್ಷ ವರ್ಗಿಸ್‌ ಪಿ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ)ಯ ನಿವೃತ್ತ ಸಹಾಯಕ ನಿರ್ದೇಶಕ ಸುರೇಶ ತುಂಗ ಮಾತನಾಡಿ ಇಂದು ಕೆಲವೊಂದು ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಗೊಳ್ಳುತ್ತಿರುವ ಬಗ್ಗೆ ಅಸಮಾಧಾನದ ಮಾತಿಗಿಂತ ಎಲ್ಲರೂ ಒಗ್ಗಟ್ಟಾಗಿ ಯಾವ ರೀತಿ ವಿದ್ಯಾರ್ಥಿಗಳ ಸಂಖ್ಯೆಯನ್ನು ಹೆಚ್ಚಿಸಬಹುದು ಎನ್ನುವ ಬಗ್ಗೆ ಚಿಂತನೆ ನಡೆಸಬೇಕು. ಗುಣಮಟ್ಟದ ಶಿಕ್ಷಣ ನೀಡುವ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳು ತುಂಬಿ ತುಳುಕುತ್ತಿರುವುದು ಎಲ್ಲರೂ ಗಮನಿಸಬೇಕಾದ ವಿಷಯ ಎಂದು ತಿಳಿಸಿದರು. ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ)ಯ ಉಪನಿರ್ದೇಶಕ ಮಾರುತಿ, ವಿವೇಕ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ನಾಗೇಶ ಶಾನುಭಾಗ್, ಜಿಲ್ಲಾ ಪದವಿ ಪೂರ್ವ ಕಾಲೇಜ ಪ್ರಾಂಶುಪಾಲರ ಸಂಘದ ರಾಜ್ಯ ಸಂಚಾಲಕ ಡಾ. ಜಿ. ಎಂ.ಗೊಂಡ, ಸಂಘದ ಸಾಂಸ್ಕೃತಿಕ ಸಂಚಾಲಕಿ ಸುಚೇತಾ, ಕ್ರೀಡಾ ಸಂಚಾಲಕ ಪ್ರಕಾಶ ಶೆಟ್ಟಿ, ಪ್ರಾಂಶುಪಾಲರ ಸಂಘದ ರವೀಂದ್ರ ಉಪಾಧ್ಯ, ಕೋಟ ವಿವೇಕ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಜಗದೀಶ ನಾವುಡ ಇದ್ದರು. ಇದೇ ಸಂದರ್ಭ ನಿವೃತ್ತ ಪ್ರಾಂಶುಪಾಲರಾದ ವಸಂತ ಆಚಾರ್ಯ, ಗೋಪಾಲ ಭಟ್‌, ಮಂಜುನಾಥ ನಾಯಕ್‌, ನಾಗರಾಜ ವೈದ್ಯ , ಉಮೇಶ ಹೆಗ್ಡೆ ಮತ್ತು ಡಿಡಿಪಿಯು ಕಚೇರಿಯ ನಿವೃತ್ತ ಕಚೇರಿ ಸಿಬ್ಬಂದಿ ವಿಜಯ ಅವರನ್ನು ಸನ್ಮಾನಿಸಲಾಯಿತು. ಜಿಲ್ಲೆಯ ಪಿಯು ಕಾಲೇಜುಗಳಲ್ಲಿ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯಲ್ಲಿ ಶೇ.100 ಮತ್ತು ಶೇ.90ಕ್ಕಿಂತ ಅಧಿಕ ಫಲಿತಾಂಶ ಪಡೆದ ಕಾಲೇಜುಗಳನ್ನು ಅಭಿನಂದಿಸಲಾಯಿತು. ಇಲಾಖೆಯ ವಿವಿಧ ಕೆಲಸಗಳಲ್ಲಿ ಸಹಕರಿಸಿದ ಎಲ್ಲ ಉಪನ್ಯಾಸಕ ವರ್ಗದವರನ್ನು ಗೌರವಿಸಲಾಯಿತು. ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಸಂಘದ ಕೋಶಾಧಿಕಾರಿ ಜಗದೀಶ ಕುಮಾರ್‌ ಸ್ವಾಗತಿಸಿದರು. ಪ್ರಾಂಶುಪಾಲರಾದ ಶ್ರೀಧರ ಶೆಟ್ಟಿ, ಜಗದೀಶ ಭಟ್‌ ಮತ್ತು ಲೀಲಾಬಾಯಿ ಭಟ್‌ ಸನ್ಮಾನಿತರನ್ನು ಪರಿಚಯಿಸಿದರು. ಪ್ರಾಂಶುಪಾಲರಾದ ಬೇಬಿ ವಂದಿಸಿದರು. ವಿಶ್ವನಾಥ ಕರಬ ಕಾರ್ಯಕ್ರಮ ನಿರೂಪಿಸಿದರು.

Explore More
  • By vjcuser
  • June 9, 2026

‘ಹೃದಯ ,ಸಂಬಂಧಿ ಕಾಯಿಲೆಗಳ ಬಗ್ಗೆ ಮಾಹಿತಿ ಕಾರ್ಯಕ್ರಮ

ಕೋಟ  ವಿವೇಕ ಪದವಿ ಪೂರ್ವ ಕಾಲೇಜು . ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಹೃದಯ ಸಂಬಂಧಿ ಕಾಯಿಲೆ ಹಾಗು ಹೃದಯಘಾತ ಇದರ ಕುರಿತಾಗಿ ವಿಜ್ಞಾನ ಸಂಘದ ವತಿಯಿಂದ ಮಾಹಿತಿ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ಕಾರ್ಯಕ್ರದ ಸಂಪನ್ಮೂಲ  ವ್ಯಕ್ತಿಯಾಗಿ ಡಾl ಪ್ರಭಾವತಿ, ಹೃದ್ರೋಗ ತಜ್ಞೆ ಜಯದೇವ ಆಸ್ಪತ್ರೆ ಬೆಂಗಳೂರು ಇಲ್ಲಿನ ಪ್ರಾಧ್ಯಾಪಕ ರು  ಆದ ಇವರು ಆಗಮಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಇಂದಿನ ದಿನಗಳಲ್ಲಿ ಬದಲಾಗುತ್ತಿರುವ ಜೀವನಶೈಲಿ, ಮತ್ತು ಆಹಾರ ಕ್ರಮ, ಒತ್ತಡದ ಬದುಕಿನಿಂದಾಗಿ ಹೆಚ್ಚು ಹೆಚ್ಚು ಹೃದಯ ಸಂಬಂಧಿ ಕಾಯಿಲೆಗಳು, ಹೃದಯಾಘಾತಗಳು ಹೆಚ್ಚುತ್ತಿದೆ. ಆದ್ದರಿಂದ ನಾವು ಬದುಕುವ ರೀತಿ, ಸೇವಿಸುವ ಆಹಾರ ಕ್ರಮ ಒಂದು ನಿಯಮದಿಂದ ಕೂಡಿರಬೇಕು. ಅಧಿಕ ಕೊಬ್ಬನ್ನು ಹೆಚ್ಚಿಸುವ, ಆರೋಗ್ಯವನ್ನು ಹಾಳು ಮಾಡುವ ಜಂಕ್ ಫುಡ್ ಗಳನ್ನು ಸೇವಿಸಲೇಬಾರದು. ಪ್ರತಿನಿತ್ಯ ವಾಕಿಂಗ್, ವ್ಯಾಯಾಮ ಮುಂತಾದ ಚಟುವಟಿಕೆಯಲ್ಲಿ ತೊಡಗಿಸಿ ಕೊಂಡು ಯಾವುದನ್ನು ಅತಿಯಾಗಿ ವರ್ತಿಸದೆ ಸಂತೋಷದಿಂದ ಬದುಕಬೇಕೆಂದು ತಿಳಿಸಿದರು. ಅವರು ಪವರ್ ಪಾಯಿಂಟ್ ಪ್ರೆಸೆಂಟೇಷನ್ ಮೂಲಕ ಹೃದಯ ,ಹೃದಯ ಸಂಬಂಧಿ ಕಾಯಿಲೆ ಬಗ್ಗೆ ವಿವರಿಸಿ ತೆಗೆದುಕೊಳ್ಳಬೇಕಾದ ಮುಂಜಾಗ್ರತೆಯ ಕ್ರಮದ ಬಗ್ಗೆ ವಿವರಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಜಗದೀಶ ನಾವಡ ಅತಿಥಿಗಳನ್ನು ಪರಿಚಯಿಸಿ ಸ್ವಾಗತಿಸಿದರು. ಜೀವಶಾಸ್ತ್ರ ಉಪನ್ಯಾಸಕ ಶ್ರೀ ಸುಬ್ರಹ್ಮಣ್ಯ ಭಟ್ ಕಾರ್ಯಕ್ರಮ ನಿರೂಪಿಸಿ, ಶ್ರೀ ಚಂದ್ರಶೇಖರ್ ಹೆಚ್ ಎಸ್ ವಂದಿಸಿದರು. ಸಂಘದ ಸಂಚಾಲಕ ಶ್ರೀ ರವಿಕಾರಂತ್ ಕಾರ್ಯಕ್ರಮ ಸಂಯೋಜಿಸಿದ್ದರು.

Explore More
  • By vjcuser
  • June 9, 2026

ವಿವೇಕ ಪದವಿ ಪೂರ್ವ ಕಾಲೇಜು ಕೋಟ, 79ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಯಕ್ಷಗಾನ ತಾಳಮದ್ದಳೆ

ಸ್ವಾತಂತ್ರ್ಯ ದಿನಾಚರಣೆಯ ದಿನದಂದು ಧ್ವಜಾರೋಹಣ ಕಾರ್ಯಕ್ರಮ ಮುಗಿದ ಬಳಿಕ ಕಾಲೇಜಿನ ಸಭಾಂಗಣದಲ್ಲಿ ಕೋಟ ವಿದ್ಯಾ ಸಂಘ ಇದರ ಆಡಳಿತ ಮಂಡಳಿ ಮತ್ತು ವಿವೇಕ ವಿದ್ಯಾ ಸಂಸ್ಥೆಗಳ ಅಧ್ಯಾಪಕರ ಕೂಡುವಿಕೆಯಲ್ಲಿ ವಾಲಿ ಮೋಕ್ಷ ಎಂಬ ಆಖ್ಯಾನದ ಯಕ್ಷಗಾನ ತಾಳಮದ್ದಲೆ ಜರುಗಿತು. ಹಿಮ್ಮೇಳದಲ್ಲಿ ಭಾಗವತರಾಗಿ ಕನ್ನಡ ಉಪನ್ಯಾಸಕರಾದ ಶ್ರೀ ಸದಾಶಿವ ಹೊಳ್ಳ, ಮದ್ದಲೆ ಗಾರರಾಗಿ ವಿವೇಕದ ಹಿಂದಿನ ವಿದ್ಯಾರ್ಥಿ ಲೋಹಿತ್ ಕೊಮೆ, ಚಂಡೆ ವಾದಕರಾಗಿ  ಪ್ರಸ್ತುತ ವಿದ್ಯಾರ್ಥಿ ಶ್ರೀ ವಾಗ್ವಿಲಾಸ್ ಭಟ್ ಭಾಗವಹಿಸಿದ್ದರು. ಮುಮ್ಮೇಳ ದಲ್ಲಿ ಅರ್ಥದಾರಿಗಳಾಗಿ, ಆಡಳಿತ ಮಂಡಳಿ ಯ ಕಾರ್ಯದರ್ಶಿ  ಎಂ ,ರಾಮದೇವ  ಐತಾಳ್ , ವಾಲಿ ಪಾತ್ರಧಾರಿಯಾಗಿ, ಗಣಿತ ಉಪನ್ಯಾಸಕ ಶ್ರೀ ಪ್ರಶಾಂತ್ ಬೇಳೂರು ಸುಗ್ರೀವನಾಗಿ,  ಹಿಂದಿ ಉಪನ್ಯಾಸಕ ಶ್ರೀ ಚಂದ್ರಶೇಖರ್ ಹೆಚ್ ಎಸ್, ಶ್ರೀ ರಾಮನಾಗಿ, ಆಂಗ್ಲ ಭಾಷೆ ಉಪನ್ಯಾಸಕ ಶ್ರೀ ಶಿವಪ್ರಸಾದ್ ಶೆಟ್ಟಿಗಾರ್ ತಾರೆಯಾಗಿ ಪಾತ್ರ ನಿರ್ವಹಿಸಿದರು. ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ಮೂಡಿಬಂದು ಪ್ರೇಕ್ಷಕರ ಮನ ಗೆದ್ದಿತು, ಆಡಳಿತ ಮಂಡಳಿಅಧ್ಯಕ್ಷರಾದ ಶ್ರೀ ಪ್ರಭಾಕರ ಮಯ್ಯ ರು ಭಾಗವಹಿಸಿದ ಕಲಾವಿದರಿಗೆ ಸ್ಮರಣಿಕೆ ಯೆನ್ನು ವಿತರಿಸಿದರು.

Explore More
  • By vjcuser
  • June 9, 2026

ಸಮಾಜಶಾಸ್ತ್ರ ಉಪನ್ಯಾಸಕರಿಗೆ ವಿದಾಯ ಸಮಾರಂಭ

ವಿವೇಕ ಪದವಿ ಪೂರ್ವ ಕಾಲೇಜಿನಲ್ಲಿ ಸಮಾಜಶಾಸ್ತ್ರ ಉಪನ್ಯಾಸಕರಾಗಿ 30 ವರ್ಷಗಳ ಕಾಲ ಸುಧೀರ್ಘ ಸೇವೆ ಸಲ್ಲಿಸಿ  ಇಲಾಖೆ ನಿಯಮದಂತೆ ವಯೋ ನಿವೃತ್ತಿ ಹೊಂದಿದ ಶ್ರೀ ಅಶೋಕ್ ಕುಮಾರ್ ಶೆಟ್ಟಿ ಇವರನ್ನು ಕೋಟ ವಿದ್ಯಾ ಸಂಘ ಮತ್ತು ವಿವೇಕ ವಿದ್ಯಾಸಂಸ್ಥೆಗಳ ಸಿಬ್ಬಂದಿ ವರ್ಗ ದ ಆಶ್ರಯದಲ್ಲಿ ಸನ್ಮಾನಿಸಿ ಬೀಳ್ಕೊಡುಗೆ ನೀಡಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಕೋಟ ವಿದ್ಯಾ ಸಂಘದ ಅಧ್ಯಕ್ಷರಾದ  ಸಿ.ಎ. ಪಿ. ಪ್ರಭಾಕರಮಯ್ಯ ಇವರು ವಹಿಸಿ ನಿವೃತ್ತರ ಸೇವೆಯನ್ನು ಸ್ಮರಿಸಿಕೊಂಡರು. ಕಾರ್ಯದರ್ಶಿ  ಎಂ, ರಾಮದೇವ ಐತಾಳ್ ಇವರು ನಿವೃತ್ತರ ಮುಂದಿನ ಜೀವನಕ್ಕೆ ಶುಭ ಹಾರೈಸಿದರು. ಉಪನ್ಯಾಸಕ ಶ್ರೀ ಸಂಜೀವ ಜಿ, ಮತ್ತು ಮುಖ್ಯೋಪಾಧ್ಯಾಯರಾದ ಶ್ರೀ ವೆಂಕಟೇಶ ಉಡುಪ ಇವರು ನಿವೃತ್ತರ ಕುರಿತಾಗಿ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು.  ಶ್ರೀ ಅಶೋಕ್ ಕುಮಾರ್ ಶೆಟ್ಟಿ ಅವರು ಸನ್ಮಾನ ಸ್ವೀಕರಿಸಿ ತಮ್ಮ ಸೇವಾ ಜೀವನದ ಅನುಭವಗಳನ್ನು ಹಂಚಿಕೊಂಡರು. ಪ್ರಾಂಶುಪಾಲರಾದ ಶ್ರೀ ಜಗದೀಶ ನಾವಡ ಪ್ರಸ್ತಾವನೆ ಯೊಂದಿಗೆ ಸ್ವಾಗತಿಸಿದರು. ಇಂಗ್ಲಿಷ್ ಮೀಡಿಯಂ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ಪ್ರೀತಿ ರೇಖಾ ಉಪಸ್ಥಿತರಿದ್ದರು. ಆಡಳಿತ ಮಂಡಳಿಯ ಎಲ್ಲ ಪದಾಧಿಕಾರಿಗಳು ವಿದ್ಯಾ ಸಂಸ್ಥೆಗಳ ಎಲ್ಲ ಸಿಬ್ಬಂದಿ ವರ್ಗದವರು ಹಾಜರಿದ್ದರು. ಬಾಲಕರ ಪ್ರೌಢಶಾಲೆಯ ಮುಖ್ಯಸಹ ಶಿಕ್ಷಕ ಶ್ರೀ ಪ್ರೇಮಾನಂದ ವಂದಿಸಿ, ಶಿಕ್ಷಕಿ  ಶ್ರೀಮತಿ ರತಿ ಬಾಯಿ ಕಾರ್ಯಕ್ರಮ ನಿರೂಪಿಸಿದರು

Explore More
  • By vjcuser
  • June 9, 2026

‘ಸಂವಹನ ಕಲೆ ‘ ಕುರಿತಾಗಿ ಮಾಹಿತಿ ಕಾರ್ಯಕ್ರಮ

ಕೋಟ ವಿದ್ಯಾರ್ಥಿಗಳು ವಿದ್ಯಾಭ್ಯಾಸದ  ಜೊತೆ ಜೊತೆಗೆ  ಎಲ್ಲಿ ,ಹೇಗೆ ಮಾತನಾಡಬೇಕು ಸಮಯ, ಸಂದರ್ಭ ಮತ್ತು  ವ್ಯಕ್ತಿಗಳನ್ನು ನೋಡಿ ಮಾತನಾಡುವ ಕೌಶಲಗಳನ್ನು ಬೆಳೆಸಿಕೊಳ್ಳಬೇಕು. ಬಿಡುವಿನ ವೇಳೆಯಲ್ಲಿ ಉತ್ತಮ ಲೇಖನಗಳನ್ನು ಪುಸ್ತಕಗಳನ್ನು  ಓದುವುದರ ಮೂಲಕ ವಿಷಯಜ್ಞಾನವನ್ನು ಸಂಪಾದಿಸಬೇಕು. ಭಾಷೆಗಳ ಬಗ್ಗೆ ವಿಶೇಷವಾದ ಗಮನ ಹರಿಸಿ ಹೆಚ್ಚೆಚ್ಚು ಭಾಷೆಗಳನ್ನು  ಕಲಿಯುವುದರಿಂದ ವ್ಯವಹರಿಸಲುಸಹಕಾರಿಯಾಗುತ್ತದೆ. ಧೃತಿಗೆಡದೆ ಧೈರ್ಯದಿಂದ ಸಿಕ್ಕ ಅವಕಾಶವನ್ನು ಉಪಯೋಗಿಸಿಕೊಂಡಲ್ಲಿ ಮುಂದೆ  ಉತ್ತಮ ವಾಗ್ಮಿ ಆಗಲು ಸಾಧ್ಯ , ಎಂದು ರೇಡಿಯೋ ಕುಂದಾಪುರ 89. 6FM ಇದರ ಕಾರ್ಯ ನಿರ್ವಾಹಕಿ ಶ್ರೀಮತಿ ಜ್ಯೋತಿ ಸಾಲಿಗ್ರಾಮ ತಿಳಿಸಿದರು. ಅವರು ವಿವೇಕ ಪದವಿಪೂರ್ವ ಕಾಲೇಜಿನ ಸಾಹಿತ್ಯ ಸಂಘದ ಆಶ್ರಯದಲ್ಲಿ ಏರ್ಪಡಿಸಿದ ಸಂವಹನ ಕಲೆ ಈ ಕುರಿತಾಗಿ ವಿದ್ಯಾರ್ಥಿಗಳೊಂದಿಗೆ ಮುಖಾಮುಖಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಜಗದೀಶನಾವಡ ಅತಿಥಿಗಳನ್ನು ಪರಿಚಯಿಸಿ ಸ್ವಾಗತಿಸಿದರು.  ಕುಮಾರಿ ಪ್ರಾಪ್ತಿ ಕಾರ್ಯಕ್ರಮ ನಿರೂಪಿಸಿ,   ಸಂಘದ ಸಂಚಾಲಕ ಶ್ರೀ ಚಂದ್ರಶೇಖರ್ ಹೆಚ್ ಎಸ್ ವಂದಿಸಿದರು.

Explore More
  • By vjcuser
  • June 9, 2026

ಸಾಹಿತ್ಯ ಸಂಘದ ಉದ್ಘಾಟನಾ ಕಾರ್ಯಕ್ರಮ

 ಕೋಟ  ವಿವೇಕ ಪದವಿಪೂರ್ವಕಾಲೇಜಿನ ಈ ಶೈಕ್ಷಣಿಕ ವರ್ಷದ ಸಾಹಿತ್ಯ ಸಂಘದ ಉದ್ಘಾಟನಾ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿನೆರವೇರಿತು. ಉದ್ಘಾಟಕರಾಗಿ, ಪ್ರೊ,ಬಾಲಕೃಷ್ಣ ಶೆಟ್ಟಿನಿವೃತ್ತ ಪ್ರಾಂಶುಪಾಲರು, ಶ್ರೀದುರ್ಗಾಪರಮೇಶ್ವರಿ ದೇವಸ್ಥಾನ ಪ್ರಥಮ ದರ್ಜೆಕಾಲೇಜು ಕಟೀಲು. ಇವರು ಆಗಮಿಸಿ ತಮ್ಮ ನುಡಿಮುತ್ತುಗಳ ಮೂಲಕ ಸಾಹಿತ್ಯ ಸಂಘವನ್ನುಉದ್ಘಾಟಿಸಿ ಮಾತನಾಡಿ ‘ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಸುಪ್ತ ಪ್ರತಿಭೆ ಇರುತ್ತದೆ ಅದನ್ನುವ್ಯಕ್ತಪಡಿಸಲು ಉತ್ತಮ ಲೇಖಕರ ಕೃತಿಗಳನ್ನುಓದಿ ಸರಿಯಾಗಿ ಅರ್ಥೈಸಿಕೊಂಡು ಕಥೆ ಕವನ, ಹನಿಗವನ ಲೇಖನಗಳನ್ನುಬರೆಯುವ ಅಭ್ಯಾಸ ವಿದ್ಯಾರ್ಥಿದೆಸೆಯಲ್ಲಿರೂಡಿಸಿಕೊಳ್ಳಬೇಕು, ಸಾಹಿತ್ಯವು ಮನುಷ್ಯ ಮನುಷ್ಯರ ನಡುವೆ ಸಹೃದಯತೆಯನ್ನುಮೂಡಿಸುತ್ತದೆ. ವಿದ್ಯಾರ್ಥಿಗಳು ಫೇಸ್ಬುಕ್, ವಾಟ್ಸಾಪ್ ಇನ್ಸಟಾ ಗ್ರಾಂ ಮುಂತಾದವುಗಳಲ್ಲಿವ್ಯರ್ಥವಾಗಿ ಸಮಯವನ್ನುಹಾಳು ಮಾಡುವುದರ ಬದಲು ಸಾಹಿತ್ಯದಲ್ಲಿಅಭಿರುಚಿಯನ್ನ ಬೆಳೆಸಿಕೊಂಡು ಹೃದಯವಂತರಾಗಬೇಕೆಂದು ತಿಳಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀಜಗದೀಶ ನಾವುಡರು ಅತಿಥಿಗಳನ್ನುಪರಿಚಯಿಸಿ ಸ್ವಾಗತಿಸಿದರು. ಕುಮಾರಿ ಭೂಮಿಕಾ ಕಾರ್ಯಕ್ರಮ ನಿರ್ವಹಿಸಿ ,ಉಪನ್ಯಾಸಕ ಶ್ರೀಸದಾಶಿವ ಹೊಳ್ಳ ವಂದಿಸಿದರು ಸಂಘದ ಸಂಚಾಲಕ ಶ್ರೀಚಂದ್ರಶೇಖರ ಎಚ್ಎಸ್ ಕಾರ್ಯಕ್ರಮ ಸಂಯೋಜಿಸಿದ್ದರು.

Explore More

Stay Connected With Child's Learning

Download the Parent App now!

contact info

Social Media Link

[mc4wp_form id=1143]

Copyright© 2025 Kota Vidya Sangha (R.) Kota   |   Powered By D-apps, Kumbashi  |   Privacy Policy