• By vjcuser
  • March 30, 2026

ರಾಜ್ಯಮಟ್ಟದಲ್ಲಿ ಕೋಟ ವಿವೇಕದ ಶರಧಿಯ ಸಾಧನೆ

ಕೋಟ: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಹಾಗೂ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಬೆಂಗಳೂರು ಇವರು  ತುಮಕೂರಿನಲ್ಲಿ ನಡೆಸಿದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಕೋಟ ವಿವೇಕ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ  ಶರಧಿ ಇವರು ಭಾಗವಹಿಸಿ ದ್ವಿತೀಯ ಸ್ಥಾನವನ್ನು ಗಳಿಸಿದ್ದಾರೆ. ಕಳೆದ ಬಾರಿಯೂ ಭಾಗವಹಿಸಿ ಪ್ರಶಸ್ತಿ ಪಡೆದಿದ್ದಾರೆ ಇವರಿಗೆ ಕೋಟವಿದ್ಯಾ ಸಂಘದ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದೆ.

Explore More
  • By vjcuser
  • March 30, 2026

ಕೋಟ ವಿವೇಕ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶರಧಿ ರಾಜ್ಯಮಟ್ಟಕ್ಕೆ

ಕೋಟ: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಹಾಗೂ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಬೆಂಗಳೂರು ಇವರು  ಉಡುಪಿಯ ಪೂರ್ಣಪ್ರಜ್ಞಾ ಕಾಲೇಜಿನಲ್ಲಿ ನಡೆಸಿದ ವಿಭಾಗಿಯ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಕೋಟ ವಿವೇಕ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ  ಶರಧಿ ಇವರು ಭಾಗವಹಿಸಿ ದ್ವಿತೀಯ ಸ್ಥಾನವನ್ನು ಗಳಿಸಿ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ . ಇವರಿಗೆ ಕೋಟವಿದ್ಯಾ ಸಂಘ ದ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.

Explore More
  • By vjcuser
  • March 30, 2026

ಕೋಟ ವಿವೇಕ ವಿದ್ಯಾಸಂಸ್ಥೆಯ ಸಂಭ್ರಮದ ವಾರ್ಷಿಕೋತ್ಸವಕ್ಕೆ ಚಾಲನೆ ವಿವೇಕ ವಿದ್ಯಾಸಂಸ್ಥೆ ಶೈಕ್ಷಣಿಕ ಕ್ಷೇತ್ರದ ಹೆಮ್ಮೆ ದೇಗುಲ- ಚಿತ್ರನಟಿ ಶೀತಲ್ ಶೆಟ್ಟಿ

ಕೋಟ:ಶೈಕ್ಷಣಿಕ ಕ್ಷೇತ್ರದಲ್ಲಿ ವಿವೇಕ ವಿದ್ಯಾಸಂಸ್ಥೆಯ ಹೆಮ್ಮೆ ವಿದ್ಯಾದೇಗುಲ ಇಲ್ಲಿನ ಶಿಕ್ಷಣ ಗುಣಮಟ್ಟ ಅದ್ಭುತವಾದದ್ದು ಎಂದು ಕನ್ನಡದ ಚಿತ್ರನಟಿ ಶೀತಲ್ ಶೆಟ್ಟಿ ಹೇಳಿದರು. ಶುಕ್ರವಾರ ಕೋಟ ವಿದ್ಯಾಸಂಘ , ಕೋಟ ವಿವೇಕ ವಿದ್ಯಾಸಂಸ್ಥೆಗಳು, ಕೋಟ ವಾರ್ಷಿಕೋತ್ಸವದ ಬಹುಮಾನ ವಿತರಣಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ ಶಿಕ್ಷಣದಲ್ಲಿ ವಿವಿಧ ಸ್ತರಗಳ ಬಗ್ಗೆ ಚಿಂತಿಸುತ್ತೇವೆ ಆದರೆ ಮುಂದೆ ಹೋದಾಗ ನಮ್ಮಲ್ಲಿರುವ ಕೌಶಲ್ಯ ಕೆಲಸ ಮಾಡುತ್ತದೆ ಅದೇ ಮುಂದೆ ನಮ್ಮ ದಾರಿಯನ್ನು ಸುಲಲಿತಗೊಳಿಸುತ್ತದೆ, ಆಯ್ಕೆ ಮಾಡಿಕೊಂಡ ವಿದ್ಯಾಕ್ಷೇತ್ರ ಹೊರತುಪಡಿಸಿ ನಮ್ಮಜೀವನ ಆಯ್ಕೆ ಬೇರೆಯದ್ದೆ ಆಗಿರುತ್ತದೆ, ನಿಮ್ಮಲ್ಲಿರುವ ಸ್ಕೀಲ್ ಇದ್ದರೆ ನಿಮ್ಮನ್ನು ಬಹು ಎತ್ತರಕ್ಕೆ ಕೊಂಡ್ಯೋಯುತ್ತದೆ, ನಮ್ಮ ಆಯ್ಕೆ ನಮ್ಮ ಜೀವನದ ತಳಹದಿಯನ್ನು ಗಟ್ಟಿಗೊಳಿಸುವ ಹಾಗೇ ಮುನ್ನಡೆಯಬೇಕು, ನಿಮ್ಮಲ್ಲಿರು ಅಗಾಧವಾದ ಪ್ರತಿಭೆಗಳನ್ನು ಹೊರ ಚುಮ್ಮಿಸಲು ಪ್ರಯತ್ನಿಸಿ ಆಗ ನಿಮ್ಮ ಬದುಕಿನಲ್ಲಿ ಸಾರ್ಥಕ್ಯ ಕಾಣಲು ಸಾಧ್ಯ, ಜೀವನದಲ್ಲಿ ಸೋಲು ಗೆಲುವು ಇದದ್ದೆ ಸೋತ್ತಿದ್ದೇನೆ ಎಂಬ ಭ್ರಮೆಯಿಂದ ಹೊರಬನ್ನಿ ಭವಿಷ್ಯದ ಭದ್ರ ಬುನಾದಿಗೆ ಪ್ರೇರಕ ಶಕ್ತಿಯಾಗಿ ಜಗತ್ತಿಗೆ ಪ್ರಜ್ವಲಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದ್ಯಾಸಂಘದ ಅಧ್ಯಕ್ಷ ಸಿ.ಎ ಪಿ. ಪ್ರಭಾಕರ ಮಯ್ಯ ವಹಿಸಿದ್ದರು. ಜಾಗೃತಿ ಸಂಚಿಕೆಯನ್ನು ಬೆಂಗಳೂರಿನ ಸಾಫ್ಟ್ವೇರ್ ಕಂಪನಿಯ ಮುಖ್ಯಸ್ಥ ಕಮಲ್ ಕಾರಂತ್ ಐರೋಡಿ ಬಿಡುಗಡೆಗೊಳಿಸಿದರು. ವಿಶೇಷ ಅಥಿತಿಗಳಾದ  ಅಮೇರಿಕರದ ವೈದ್ಯರಾದ ಡಾ.ಶ್ರೀಪತಿ ಹೊಳ್ಳ ಇವರನ್ನು ಸನ್ಮಾನಿಸಲಾಯಿತು. ಇದೇ ವೇಳೆ ವೇದಿಕೆಯಲ್ಲಿದ್ದ ಮೂವರು ಹಿಂದಿನ ವಿದ್ಯಾರ್ಥಿಗಳಾದ ಕಮಲ್ ಕಾರಂತ್ , ಶೀತಲ್ ಶೆಟ್ಟಿ, ಡಾ.ಸ್ವಸ್ತಿಕ್ ಉಪಾಧ್ಯಾ ಇವರುಗಳನ್ನು ಅಭಿನಂದಿಸಲಾಯಿತು. ಅಭ್ಯಾಗತರಾಗಿ ಮಂಗಳೂರಿನ ಫಾದರ್ ಮುಲ್ಲರ್ಸ್ ಆಸ್ಪತ್ರೆ ವೈದ್ಯರಾದ ಡಾ| ಸ್ವಸ್ತಿಕ್ ಉಪಾಧ್ಯ ಪಿ.,ವಿವೇಕ ವಿದ್ಯಾಸಂಸ್ಥೆಯ ಹಿಂದಿನ ವಿದ್ಯಾಸಂಘದ ಅಧ್ಯಕ್ಷ ರಮಾನಂದ ಭಟ್, ವಿದ್ಯಾಸಂಘದ ಉಪಾಧ್ಯಕ್ಷ ಶ್ರೀಧರ ಉಪಾಧ್ಯಾ, ಕಾರ್ಯದರ್ಶಿ ರಾಮದೇವ ಐತಾಳ್, ವಿವೇಕ ಬಾಲಕೀಯರ ಪ್ರೌಢಶಾಲಾ ಮುಖ್ಯ ಶಿಕ್ಷಕ ವೆಂಕಟೇಶ ಉಡುಪ, ಆಂಗ್ಲ ಮಾಧ್ಯಮ ವಿಭಾಗದ ಮುಖ್ಯ ಶಿಕ್ಷಕಿ ಪ್ರೀತಿ ರೇಖಾ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲ ಕೆ.ಜಗದೀಶ್ ನಾವಡ ಸ್ವಾಗತಿಸಿ ಪರಿಚಯಿಸಿದರು. ಕಾಲೇಜಿನ ಕನ್ನಡ ಪ್ರಾಧ್ಯಾಪಕ ಸದಾಶಿವ ಹೊಳ್ಳ ಕಾರ್ಯಕ್ರಮ ನಿರೂಪಿಸಿದರು. ಬಾಲಕರ ವಿಭಾಗದ ಮುಖ್ಯ ಶಿಕ್ಷಕ ಪ್ರೇಮಾನಂದ ವಂದಿಸಿದರು. ಕೋಟ ವಿದ್ಯಾಸಂಘ ,ಕೋಟ ವಿವೇಕ ವಿದ್ಯಾಸಂಸ್ಥೆಗಳು, ಕೋಟ ವಾರ್ಷಿಕೋತ್ಸವದ ಬಹುಮಾನ ವಿತರಣಾ ಸಮಾರಂಭದಲ್ಲಿ ವಿಶೇಷ ಅಥಿತಿಗಳಾದ  ಅಮೇರಿಕರದ ವೈದ್ಯರಾದ ಡಾ.ಶ್ರೀಪತಿ ಹೊಳ್ಳ ಇವರನ್ನು ಸನ್ಮಾನಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಕೆ.ಜಗದೀಶ್ ನಾವಡ, ವಿದ್ಯಾಸಂಘದ ಅಧ್ಯಕ್ಷ ಸಿ.ಎ ಪಿ. ಪ್ರಭಾಕರ ಮಯ್ಯ ಇದ್ದರು.

Explore More
  • By vjcuser
  • March 30, 2026

ನಿಧೀಶ ಭಟ್ಟ ರಾಜ್ಯಮಟ್ಟಕ್ಕೆ ಆಯ್ಕೆ

ಕೋಟ: ಉಡುಪಿ ಜಿಲ್ಲೆಯ ಕನ್ನಡ ಮತ್ತು ಸಂಸ್ಕöÈತಿ ಇಲಾಖೆಯ ಆಶ್ರಯದಲ್ಲಿ ನಡೆದ 2025-26ನೇ ಸಾಲಿನ ಜಿಲ್ಲಾ ಮಟ್ಟದ ಕಲಾ ಪ್ರತಿಭೋತ್ಸವ ಸ್ಪರ್ಧೆಯಲ್ಲಿ ಹಿಂದೂಸ್ಥಾನಿ ಸಂಗೀತ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಮೈಸೂರು ವಿಭಾಗಮಟ್ಟಕ್ಕೆ ಆಯ್ಕೆ ಆದ ನಿಧೀಶ ಭಟ್ಟ. ಈತ ಕೋಟ ವಿವೇಕ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಯಾಗಿದ್ದು ಅಧ್ಯಾಪಕ ಶಂಭು ಭಟ್ಟ ಹಾಗೂ ರಮ್ಯಾ ದಂಪತಿಗಳ ಪುತ್ರನಾಗಿದ್ದಾನೆ.

Explore More
  • By vjcuser
  • March 30, 2026

ಕೋಟ ವಿವೇಕ ಸಂಸ್ಥೆಗಳ ವಾರ್ಷಿಕ ಕ್ರೀಡಾಕೂಟಕ್ಕೆ ವಿಧ್ಯುಕ್ತ ಚಾಲನೆ

ಕೋಟ: ಕೋಟ ವಿದ್ಯಾ ಸಂಘ  ಕೋಟ ಇವರ ಆಶ್ರಯದಲ್ಲಿ ನಡೆಯುತ್ತಿರುವ ವಿವೇಕ ಶಿಕ್ಷಣ ಸಂಸ್ಥೆಗಳ 2025ರ ವಾರ್ಷಿಕ ಕ್ರೀಡಾಕೂಟವು ವಿಜೃಂಭಣೆಯಿAದ ನಡೆಯಿತು. ಸಮಾರಂಭವನ್ನು ಭಾರತೀಯ ಮಿಲಿಟರಿಯಲ್ಲಿ ಆಡಳಿತಾತ್ಮಕ ಸಹಾಯಕ ಅಧಿಕಾರಿಯಾಗಿ ಜಾಮ್‌ನಗರದಲ್ಲಿ ಸೇವೆ ಸಲ್ಲಿಸುತ್ತಿರುವ ಸಂಸ್ಥೆಯ ಹೆಮ್ಮೆಯ ಹಳೆಯ ವಿದ್ಯಾರ್ಥಿ  ಎಸ್.ಜಿ.ಟಿ. ಶ್ರೀಕಾಂತ್ ಮಧ್ಯಸ್ಥ ಅವರು ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಕ್ರೀಡಾ ಸ್ಫೂರ್ತಿ ತುಂಬಿದರು. ತಮ್ಮ ವೃತ್ತಿ ಬದುಕಿನ ಅನುಭವಗಳನ್ನು ಹಂಚಿಕೊAಡ ಶ್ರೀ ಶ್ರೀಕಾಂತ್ ಮಧ್ಯಸ್ಥ ಅವರು, “ಕ್ರೀಡೆಯು ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಸಹಕಾರಿ. ಕ್ರೀಡೆಯಿಂದ ಕಲಿಯುವ ಶಿಸ್ತು, ಸಂಯಮ ಮತ್ತು ಸವಾಲುಗಳನ್ನು ಎದುರಿಸುವ ಮನೋಭಾವವು ಮಿಲಿಟರಿ ಸೇವೆ ಸೇರಿದಂತೆ ಯಾವುದೇ ಉನ್ನತ ಸಾಧನೆಗೆ ಬುನಾದಿಯಾಗುತ್ತದೆ. ಕ್ರೀಡೆಯಲ್ಲಿ ಸಕ್ರಿಯರಾಗಿದ್ದರಿಂದಲೇ ನಾನು ಭಾರತೀಯ ಮಿಲಿಟರಿ ವೃತ್ತಿಯನ್ನು ಆಯ್ಕೆ ಮಾಡಲು ಸಾಧ್ಯವಾಯಿತು” ಎಂದರು. ವಿದ್ಯಾರ್ಥಿ ದಿನಗಳಲ್ಲಿ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ರಾಷ್ಟ್ರಮಟ್ಟದ ಬಹುಮಾನ ಪಡೆದಿದ್ದನ್ನು ಸ್ಮರಿಸಿದ ಅವರು, ತಮ್ಮ ಈ ಸಾಧನೆಗೆ ಸಹಕರಿಸಿದ ಎಲ್ಲ ದೈಹಿಕ ಶಿಕ್ಷಕರಿಗೆ ಕೃತಜ್ಞತೆ ಸಲ್ಲಿಸಿ, ವಿದ್ಯಾರ್ಥಿಗಳು ಕೇವಲ ಗೆಲುವಿಗಾಗಿ ಅಲ್ಲದೇ ಉತ್ತಮ ಕ್ರೀಡಾ ಮನೋಭಾವದಿಂದ ಭಾಗವಹಿಸಬೇಕೆಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಯೋಧ  ಶ್ರೀಕಾಂತ್ ಮಧ್ಯಸ್ಥ ಅವರನ್ನು ಸಂಸ್ಥೆಯ ಪರವಾಗಿ ಸನ್ಮಾನಿಸಲಾಯಿತು. ಮುಖ್ಯ ಅತಿಥಿಗಳಾಗಿ ಕೋಟ ವಿದ್ಯಾ ಸಂಘದ ಜತೆ ಕಾರ್ಯದರ್ಶಿ  ಪಿ.ಮಂಜುನಾಥ್ ಉಪಾಧ್ಯಾ ಕ್ರೀಡಾ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಕ್ರೀಡಾಕೂಟದಲ್ಲಿ ಪ್ರಶಸ್ತಿ ಮುಖ್ಯವಲ್ಲ, ಎಲ್ಲರೂ ಭಾಗವಹಿಸುವುದು ಮುಖ್ಯ ಎಂದು ಕರೆ ನೀಡಿ ಕ್ರೀಡೆಯಿಂದ ಮನಸ್ಸು ಹಗುರವಾಗುತ್ತದೆ ಮತ್ತು ಇದು ಶ್ರೀಕಾಂತ್ ಮಧ್ಯಸ್ಥ ಅವರ ಹಾಗೆ ಉನ್ನತ ಸಾಧನೆ ಗೈಯ್ಯಲು ಸಹಾಯಕ ಎಂದರು. ಈ ಸಂದರ್ಭದಲ್ಲಿ ಬಾಲಕಿಯರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ವೆಂಕಟೇಶ ಉಡುಪ, ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ  ಪ್ರೀತಿ ರೇಖಾ, ಬಾಲಕರ ಪ್ರೌಢಶಾಲೆಯ ಹಿರಿಯ ಸಹಾಯಕ ಶಿಕ್ಷಕ ಪ್ರೇಮಾನಂದ ಮತ್ತು ಪ್ರಕಾಶ ಮಧ್ಯಸ್ಥ ಉಪಸ್ಥಿತರಿದ್ದರು. ಕ್ರೀಡೋತ್ಸವವು ವಿವೇಕ ಸಂಸ್ಥೆಯ ವಿದ್ಯಾರ್ಥಿಗಳ ಎನ್‌ಸಿಸಿ ಪರೇಡ್ ಮತ್ತು ಬ್ಯಾಂಡ್‌ನೊoದಿಗೆ ಭವ್ಯವಾದ ಪಥಸಂಚಲನದೊoದಿಗೆ ಆರಂಭಗೊoಡಿತು. ಯೋಧ  ಶ್ರೀಕಾಂತ್ ಮಾಧ್ಯಾಸ್ಥ ಕ್ರೀಡಾ ಜ್ಯೋತಿಯನ್ನು ಬೆಳಗಿಸುವ ಮೂಲಕ ಕ್ರೀಡಾಕೂಟಕ್ಕೆ ವಿಧ್ಯುಕ್ತ ಚಾಲನೆ ನೀಡಿದರು. ಕಾರ್ಯಕ್ರಮ ನಿರ್ವಹಣೆಯನ್ನು ಚಂದ್ರಶೇಖರ್ ಎಚ್.ಎಸ್., ನರೇಂದ್ರ ಕುಮಾರ್, ಶಿವಪ್ರಸಾದ್ ಶೆಟ್ಟಿಗಾರ್ ಹಾಗೂ ಮಹಾಲಕ್ಷ್ಮೀ ಅವರು ನಿರ್ವಹಿಸಿದರು. ವಿವೇಕ ಪಿಯು ಕಾಲೇಜಿನ ಪ್ರಾಂಶುಪಾಲ ಕೆ. ಜಗದೀಶ ನಾವಡ ಸ್ವಾಗತಿಸಿದರು. ಕ್ರೀಡಾಕೂಟದ ಜವಾಬ್ದಾರಿಯನ್ನು ದೈಹಿಕ ಶಿಕ್ಷಕರಾದ ಮಮತಾ,  ಗಣೇಶ್ ಶೆಟ್ಟಿ,  ವಿಶ್ವನಾಥ್ ನಾಯಕ್ ಹಾಗೂ  ರಕ್ಷತ್ ಅವರು ಯಶಸ್ವಿಯಾಗಿ ನಿಭಾಯಿಸಿದರು. ಕೋಟ ವಿದ್ಯಾ ಸಂಘ  ಕೋಟ ಇವರ ಆಶ್ರಯದಲ್ಲಿ ನಡೆಯುತ್ತಿರುವ ವಿವೇಕ ಶಿಕ್ಷಣ ಸಂಸ್ಥೆಗಳ 2025ರ ವಾರ್ಷಿಕ ಕ್ರೀಡಾಕೂಟದಲ್ಲಿ ಯೋಧ  ಶ್ರೀಕಾಂತ್ ಮಧ್ಯಸ್ಥ ಅವರನ್ನು ಸಂಸ್ಥೆಯ ಪರವಾಗಿ ಸನ್ಮಾನಿಸಲಾಯಿತು. ವಿವೇಕ ಪಿಯು ಕಾಲೇಜಿನ ಪ್ರಾಂಶುಪಾಲ ಕೆ. ಜಗದೀಶ ನಾವಡ, ಬಾಲಕಿಯರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ವೆಂಕಟೇಶ ಉಡುಪ, ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ  ಪ್ರೀತಿ ರೇಖಾ ಇದ್ದರು.

Explore More
  • By vjcuser
  • March 30, 2026

ಕೋಟ ವಿವೇಕ ಪದವಿ ಪೂರ್ವ ಕಾಲೇಜಿನಲ್ಲಿ ಸಮಾಜ ಸೇವಾ ಸಂಘ ಉದ್ಘಾಟನೆ ಅವಕಾಶ ಸಿಕ್ಕಾಗ ಸಹಾಯಮಾಡುವ ಮನಸ್ಥಿತಿ ಸೃಷ್ಠಿಸಿಕೊಳ್ಳಿ – ಕೆ ತಾರಾನಾಥ ಹೊಳ್ಳ

ಕೋಟ: ಕೋಟ ವಿವೇಕ ಪದವಿ ಪೂರ್ವ ಕಾಲೇಜಿನ ಈ ಶೈಕ್ಷಣಿಕ ವರ್ಷದ ಸಮಾಜ ಸೇವಾ ಸಂಘದ ಉದ್ಘಾಟನಾ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮವನ್ನು ಗೆಳೆಯರ ಬಳಗ ಕಾರ್ಕಡ ಅಧ್ಯಕ್ಷ ಕೆ.ತಾರಾನಾಥ ಹೊಳ್ಳ ಕಾಲೇಜಿನ ಆವರಣದಲ್ಲಿ ಸಸಿ ನೆಡುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಅಧ್ಯಯನದೊಂದಿಗೆ ಸಾಮಾಜಿಕ ಸೇವೆಯಲ್ಲಿ ಭಾಗವಹಿಸಬೇಕು. ಅವಕಾಶ ಸಿಕ್ಕಾಗ ಇತರರಿಗೆ ಸಹಾಯ ಆಗುವ ಸೇವಾ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಲ್ಲಿ ಮುಂದೆ ಸಮಾಜದಲ್ಲಿ ಉತ್ತಮ ನಾಗರಿಕನಾಗಲು ಸಾಧ್ಯ, ಇದರೊಂದಿಗೆ ಪರಿಸರ ಪ್ರೇಮವನ್ನು ಬೆಳೆಸಿಕೊಂಡು ಅದರ ರಕ್ಷಣಾ ಕಾರ್ಯದಲ್ಲಿ ತೊಡಗಿ ಪರಿಸರ ಸ್ನೇಹಿ ಆಗಬೇಕೆಂದು ಕರೆಯಿತ್ತರು. ಕಾಲೇಜಿನ ಪ್ರಾಂಶುಪಾಲ ಜಗದೀಶ ನಾವಡ ಅತಿಥಿಗಳನ್ನು ಪರಿಚಯಿಸಿ ಸ್ವಾಗತಿಸಿದರು. ಸಮಾಜ ಶಾಸ್ತ್ರ ಉಪನ್ಯಾಸಕ ಅಶೋಕ್ ಕುಮಾರ್ ಶೆಟ್ಟಿ  ಮತ್ತು ಸಮಾಜ ಸೇವಾ ಸಂಘದ ಅಧ್ಯಕ್ಷ ಪವನ್ ಕುಮಾರ ವೇದಿಕೆಯಲ್ಲಿದ್ದರು. ಸಂಘದ ಕಾರ್ಯದರ್ಶಿ ಕುಮಾರಿ  ಕೃಪಾ ವಂದಿಸಿ, ಕುಮಾರಿ ಭೂಮಿಕಾ ಟಿ ಡಿ ನಿರೂಪಿಸಿದರು.  ಸಂಘದ ಸಂಚಾಲಕ  ಕೃಷ್ಣ ಕಾರ್ಯಕ್ರಮ ಸಂಯೋಜಿಸಿದ್ದರು. ಕೋಟ ವಿವೇಕ ಪದವಿ ಪೂರ್ವ ಕಾಲೇಜಿನ ಈ ಶೈಕ್ಷಣಿಕ ವರ್ಷದ ಸಮಾಜ ಸೇವಾ ಸಂಘವನ್ನು ಗೆಳೆಯರ ಬಳಗ ಕಾರ್ಕಡ ಅಧ್ಯಕ್ಷ ಕೆ.ತಾರಾನಾಥ ಹೊಳ್ಳ ಕಾಲೇಜಿನ ಆವರಣದಲ್ಲಿ ಸಸಿ ನೆಡುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲ ಜಗದೀಶ ನಾವಡ, ಸಮಾಜ ಶಾಸ್ತ್ರ ಉಪನ್ಯಾಸಕ ಅಶೋಕ್ ಕುಮಾರ್ ಇದ್ದರು.

Explore More
  • By vjcuser
  • March 30, 2026

ಉಡುಪಿ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಬಾಲಕ ಬಾಲಕಿಯರ ಖೊಖೊ ಪಂದ್ಯಾಟ

ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ. ಕೋಟ ವಿದ್ಯಾಸಂಘ  ರಿ ಕೋಟ, ಮತ್ತು ವಿವೇಕ ವಿದ್ಯಾ ಸಂಸ್ಥೆಗಳ ಸಂಯುಕ್ತಆಶ್ರಯದಲ್ಲಿ ಪದವಿ ಪೂರ್ವ ವಿಭಾಗದ ಬಾಲಕ ಬಾಲಕಿಯರ ಖೊ  ಖೋ ಪಂದ್ಯಾಟದ ಉದ್ಘಾಟನಾ ಸಮಾರಂಭ ಕಾಲೇಜಿನ ಕ್ರೀಡಾಂಗಣದಲ್ಲಿ ಜರುಗಿತು. ಕಾರ್ಯಕ್ರಮದ ಉದ್ಘಾಟಕರಾಗಿ, ಡಾ । ಎಚ್ ,ವಿ ಸೋಮಿಯಾಜಿ, ನಿವೃತ್ತ ಪ್ರಾಂಶುಪಾಲರು ಎಸ್ ಎಂ ಎಸ್ ಪದವಿ ಕಾಲೇಜು ಬ್ರಹ್ಮಾವರ ಇವರು ದೀಪ ಬೆಳಗಿಸಿ ಮಾತನಾಡಿ, ವಿದ್ಯಾರ್ಥಿಗಳು ಉತ್ಸಾಹದಿಂದ, ಕ್ರೀಡಾ ಸ್ಪೂರ್ತಿಯಿಂದ ಆಟೋಟದಲ್ಲಿ ಭಾಗವಹಿಸಬೇಕು. ವಿಶೇಷವಾಗಿ ಖೋ  ಖೋ ಆಟದಿಂದ ವಿದ್ಯಾರ್ಥಿಗಳಲ್ಲಿ ಸಂಘಟಿತ ಶಕ್ತಿ, ಜಾಗರೂಕತೆ, ಮತ್ತು ಚುರುಕುತನವನ್ನು ಹೆಚ್ಚಿಸುವ ಸಾಮರ್ಥ್ಯವಿದೆ. ಕೇವಲ ಗೆಲುವನ್ನ ಅಪೇಕ್ಷಿಸದೆ ಸ್ವಯಂ ಸ್ಫೂರ್ತಿಯಿಂದ ಭಾಗವಹಿಸಬೇಕೆಂದು ಅರುಣಿಮಾ ಸಿನ್ಹಾ ಅವರ ಜೀವನದ ಕಥೆಯನ್ನು ವಿವರಿಸುತ್ತಾ ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೋಟ ವಿದ್ಯಾ ಸಂಘದ ಕಾರ್ಯದರ್ಶಿ ಎಂ ರಾಮದೇವ ಐತಾಳ ವಹಿಸಿದ್ದರು. ವಿದ್ಯಾಸಂಘದ ಸದಸ್ಯರಾದ ಶ್ರೀ ವಸಂತ ಶೆಟ್ಟಿ ಇವರು ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಜಗದೀಶನಾವುಡ ಅತಿಥಿಗಳನ್ನು ಪರಿಚಯಿಸಿ ಸ್ವಾಗತಿಸಿದರು. ಕ್ರೀಡಾಪರಿವೇಕ್ಷಕರಾದ  ಶ್ರೀನವೀನ್ ಚಂದ್ರ ನಾಯಕ್  ಆಂಗ್ಲ ಮಾಧ್ಯಮ ಪ್ರೌಢಶಾಲೆ ಮುಖ್ಯಸ್ಥರಾದ ಶ್ರೀಮತಿ ಪ್ರೀತಿ ರೇಖಾ ಉಪಸ್ಥಿತರಿದ್ದರು. ಶಿಕ್ಷಕಿ ಶ್ರೀಮತಿ ನಳಿನಾಕ್ಷಿ ಪ್ರಾರ್ಥಿಸಿ, ಶ್ರೀ ಪ್ರೇಮಾನಂದ್ ಧನ್ಯವಾದವಿತ್ತರು. ಶ್ರೀ ಚಂದ್ರಶೇಖರ್ ಹೆಚ್ ಕಾರ್ಯಕ್ರಮ ನಿರೂಪಿಸಿದರು. ಅಪರಾಹ್ನ ನಡೆದ ಸಮಾರೋಪ ಸಮಾರಂಭದಲ್ಲಿ ಕೋಟ ವಿದ್ಯಾ ಸಂಘದ ಸದಸ್ಯರಾದ  ಶ್ರೀ ವಸಂತ್ ಶೆಟ್ಟಿ ಇವರು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವೈ ಸದಾರಾಮ ಹೇರ್ಳೆ, ಉಪಾಧ್ಯಕ್ಷರು ವಿವೇಕ ಹಿಂದಿನ ವಿದ್ಯಾರ್ಥಿ ಸಂಘ, ಮತ್ತು ಶ್ರೀ ಸುಬ್ರಾಯ ಆಚಾರ್ ಕೋಟ , ಇವರು  ವಿದ್ಯಾರ್ಥಿಗಳಿಗೆ ಶುಭಹಾರೈಸಿ ವಿಜೇತ ತಂಡಗಳಿಗೆ ಪಾರಿತೋಷಕ ವಿತರಿಸಿದರು. ಹಿರಿಯ ದೈಹಿಕ ಶಿಕ್ಷಣ ಉಪನ್ಯಾಸಕ ಶ್ರೀ ಉದಯ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. ಬಾಲಕರ ಮತ್ತು ಬಾಲಕಿಯರ  ಎರಡೂ ವಿಭಾಗಗಳಲ್ಲಿ ಬ್ರಹ್ಮಾವರ ತಾಲೂಕು ಪ್ರಶಸ್ತಿ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆ ಯಾಗಿದೆ. ಶ್ರೀ ಶಿವಪ್ರಸಾದ್ ಶೆಟ್ಟಿಗಾರ್ ನಿರೂಪಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ಶ್ರೀ ವಿಶ್ವನಾಥ ನಾಯಕ್ ಸಹಕರಿಸಿದರು.

Explore More
  • By vjcuser
  • March 30, 2026

ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲ ಸಂಘದ ವಾರ್ಷಿಕ ಮಹಾಸಭೆ, ಶೈಕ್ಷಣಿಕ ಸಮ್ಮೇಳನ

ಗುಣಮಟ್ಟದ ಶಿಕ್ಷಣದೊಂದಿಗೆ ಶಿಸ್ತಿನ ಶಿಕ್ಷಣ ನೀಡುವತ್ತ ಉಪನ್ಯಾಕರು ಗಮನ ಹರಿಸಿದಲ್ಲಿ ವಿದ್ಯಾರ್ಥಿಗಳೊಂದಿಗೆ ಶಿಕ್ಷಣ ಸಂಸ್ಥೆಗಳೂ ಅಭಿವೃದ್ಧಿ ಹೊಂದುತ್ತವೆ ಎಂದು ಕೋಟ ವಿವೇಕ ವಿದ್ಯಾ ಸಂಘದ ಕಾರ್ಯದರ್ಶಿ ಎಂ.ರಾಮದೇವ ಐತಾಳ ಹೇಳಿದರು. ಕೋಟ ವಿವೇಕ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಬುಧವಾರ ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲ ಸಂಘದ ವಾರ್ಷಿಕ ಮಹಾಸಭೆ, ಶೈಕ್ಷಣಿಕ ಸಮ್ಮೇಳನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರ ಸಂಘದ ಅಧ್ಯಕ್ಷ ವರ್ಗಿಸ್‌ ಪಿ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ)ಯ ನಿವೃತ್ತ ಸಹಾಯಕ ನಿರ್ದೇಶಕ ಸುರೇಶ ತುಂಗ ಮಾತನಾಡಿ ಇಂದು ಕೆಲವೊಂದು ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಗೊಳ್ಳುತ್ತಿರುವ ಬಗ್ಗೆ ಅಸಮಾಧಾನದ ಮಾತಿಗಿಂತ ಎಲ್ಲರೂ ಒಗ್ಗಟ್ಟಾಗಿ ಯಾವ ರೀತಿ ವಿದ್ಯಾರ್ಥಿಗಳ ಸಂಖ್ಯೆಯನ್ನು ಹೆಚ್ಚಿಸಬಹುದು ಎನ್ನುವ ಬಗ್ಗೆ ಚಿಂತನೆ ನಡೆಸಬೇಕು. ಗುಣಮಟ್ಟದ ಶಿಕ್ಷಣ ನೀಡುವ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳು ತುಂಬಿ ತುಳುಕುತ್ತಿರುವುದು ಎಲ್ಲರೂ ಗಮನಿಸಬೇಕಾದ ವಿಷಯ ಎಂದು ತಿಳಿಸಿದರು. ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ)ಯ ಉಪನಿರ್ದೇಶಕ ಮಾರುತಿ, ವಿವೇಕ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ನಾಗೇಶ ಶಾನುಭಾಗ್, ಜಿಲ್ಲಾ ಪದವಿ ಪೂರ್ವ ಕಾಲೇಜ ಪ್ರಾಂಶುಪಾಲರ ಸಂಘದ ರಾಜ್ಯ ಸಂಚಾಲಕ ಡಾ. ಜಿ. ಎಂ.ಗೊಂಡ, ಸಂಘದ ಸಾಂಸ್ಕೃತಿಕ ಸಂಚಾಲಕಿ ಸುಚೇತಾ, ಕ್ರೀಡಾ ಸಂಚಾಲಕ ಪ್ರಕಾಶ ಶೆಟ್ಟಿ, ಪ್ರಾಂಶುಪಾಲರ ಸಂಘದ ರವೀಂದ್ರ ಉಪಾಧ್ಯ, ಕೋಟ ವಿವೇಕ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಜಗದೀಶ ನಾವುಡ ಇದ್ದರು. ಇದೇ ಸಂದರ್ಭ ನಿವೃತ್ತ ಪ್ರಾಂಶುಪಾಲರಾದ ವಸಂತ ಆಚಾರ್ಯ, ಗೋಪಾಲ ಭಟ್‌, ಮಂಜುನಾಥ ನಾಯಕ್‌, ನಾಗರಾಜ ವೈದ್ಯ , ಉಮೇಶ ಹೆಗ್ಡೆ ಮತ್ತು ಡಿಡಿಪಿಯು ಕಚೇರಿಯ ನಿವೃತ್ತ ಕಚೇರಿ ಸಿಬ್ಬಂದಿ ವಿಜಯ ಅವರನ್ನು ಸನ್ಮಾನಿಸಲಾಯಿತು. ಜಿಲ್ಲೆಯ ಪಿಯು ಕಾಲೇಜುಗಳಲ್ಲಿ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯಲ್ಲಿ ಶೇ.100 ಮತ್ತು ಶೇ.90ಕ್ಕಿಂತ ಅಧಿಕ ಫಲಿತಾಂಶ ಪಡೆದ ಕಾಲೇಜುಗಳನ್ನು ಅಭಿನಂದಿಸಲಾಯಿತು. ಇಲಾಖೆಯ ವಿವಿಧ ಕೆಲಸಗಳಲ್ಲಿ ಸಹಕರಿಸಿದ ಎಲ್ಲ ಉಪನ್ಯಾಸಕ ವರ್ಗದವರನ್ನು ಗೌರವಿಸಲಾಯಿತು. ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಸಂಘದ ಕೋಶಾಧಿಕಾರಿ ಜಗದೀಶ ಕುಮಾರ್‌ ಸ್ವಾಗತಿಸಿದರು. ಪ್ರಾಂಶುಪಾಲರಾದ ಶ್ರೀಧರ ಶೆಟ್ಟಿ, ಜಗದೀಶ ಭಟ್‌ ಮತ್ತು ಲೀಲಾಬಾಯಿ ಭಟ್‌ ಸನ್ಮಾನಿತರನ್ನು ಪರಿಚಯಿಸಿದರು. ಪ್ರಾಂಶುಪಾಲರಾದ ಬೇಬಿ ವಂದಿಸಿದರು. ವಿಶ್ವನಾಥ ಕರಬ ಕಾರ್ಯಕ್ರಮ ನಿರೂಪಿಸಿದರು.

Explore More
  • By vjcuser
  • March 30, 2026

‘ಹೃದಯ ,ಸಂಬಂಧಿ ಕಾಯಿಲೆಗಳ ಬಗ್ಗೆ ಮಾಹಿತಿ ಕಾರ್ಯಕ್ರಮ

ಕೋಟ  ವಿವೇಕ ಪದವಿ ಪೂರ್ವ ಕಾಲೇಜು . ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಹೃದಯ ಸಂಬಂಧಿ ಕಾಯಿಲೆ ಹಾಗು ಹೃದಯಘಾತ ಇದರ ಕುರಿತಾಗಿ ವಿಜ್ಞಾನ ಸಂಘದ ವತಿಯಿಂದ ಮಾಹಿತಿ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ಕಾರ್ಯಕ್ರದ ಸಂಪನ್ಮೂಲ  ವ್ಯಕ್ತಿಯಾಗಿ ಡಾl ಪ್ರಭಾವತಿ, ಹೃದ್ರೋಗ ತಜ್ಞೆ ಜಯದೇವ ಆಸ್ಪತ್ರೆ ಬೆಂಗಳೂರು ಇಲ್ಲಿನ ಪ್ರಾಧ್ಯಾಪಕ ರು  ಆದ ಇವರು ಆಗಮಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಇಂದಿನ ದಿನಗಳಲ್ಲಿ ಬದಲಾಗುತ್ತಿರುವ ಜೀವನಶೈಲಿ, ಮತ್ತು ಆಹಾರ ಕ್ರಮ, ಒತ್ತಡದ ಬದುಕಿನಿಂದಾಗಿ ಹೆಚ್ಚು ಹೆಚ್ಚು ಹೃದಯ ಸಂಬಂಧಿ ಕಾಯಿಲೆಗಳು, ಹೃದಯಾಘಾತಗಳು ಹೆಚ್ಚುತ್ತಿದೆ. ಆದ್ದರಿಂದ ನಾವು ಬದುಕುವ ರೀತಿ, ಸೇವಿಸುವ ಆಹಾರ ಕ್ರಮ ಒಂದು ನಿಯಮದಿಂದ ಕೂಡಿರಬೇಕು. ಅಧಿಕ ಕೊಬ್ಬನ್ನು ಹೆಚ್ಚಿಸುವ, ಆರೋಗ್ಯವನ್ನು ಹಾಳು ಮಾಡುವ ಜಂಕ್ ಫುಡ್ ಗಳನ್ನು ಸೇವಿಸಲೇಬಾರದು. ಪ್ರತಿನಿತ್ಯ ವಾಕಿಂಗ್, ವ್ಯಾಯಾಮ ಮುಂತಾದ ಚಟುವಟಿಕೆಯಲ್ಲಿ ತೊಡಗಿಸಿ ಕೊಂಡು ಯಾವುದನ್ನು ಅತಿಯಾಗಿ ವರ್ತಿಸದೆ ಸಂತೋಷದಿಂದ ಬದುಕಬೇಕೆಂದು ತಿಳಿಸಿದರು. ಅವರು ಪವರ್ ಪಾಯಿಂಟ್ ಪ್ರೆಸೆಂಟೇಷನ್ ಮೂಲಕ ಹೃದಯ ,ಹೃದಯ ಸಂಬಂಧಿ ಕಾಯಿಲೆ ಬಗ್ಗೆ ವಿವರಿಸಿ ತೆಗೆದುಕೊಳ್ಳಬೇಕಾದ ಮುಂಜಾಗ್ರತೆಯ ಕ್ರಮದ ಬಗ್ಗೆ ವಿವರಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಜಗದೀಶ ನಾವಡ ಅತಿಥಿಗಳನ್ನು ಪರಿಚಯಿಸಿ ಸ್ವಾಗತಿಸಿದರು. ಜೀವಶಾಸ್ತ್ರ ಉಪನ್ಯಾಸಕ ಶ್ರೀ ಸುಬ್ರಹ್ಮಣ್ಯ ಭಟ್ ಕಾರ್ಯಕ್ರಮ ನಿರೂಪಿಸಿ, ಶ್ರೀ ಚಂದ್ರಶೇಖರ್ ಹೆಚ್ ಎಸ್ ವಂದಿಸಿದರು. ಸಂಘದ ಸಂಚಾಲಕ ಶ್ರೀ ರವಿಕಾರಂತ್ ಕಾರ್ಯಕ್ರಮ ಸಂಯೋಜಿಸಿದ್ದರು.

Explore More
  • By vjcuser
  • March 30, 2026

ವಿವೇಕ ಪದವಿ ಪೂರ್ವ ಕಾಲೇಜು ಕೋಟ, 79ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಯಕ್ಷಗಾನ ತಾಳಮದ್ದಳೆ

ಸ್ವಾತಂತ್ರ್ಯ ದಿನಾಚರಣೆಯ ದಿನದಂದು ಧ್ವಜಾರೋಹಣ ಕಾರ್ಯಕ್ರಮ ಮುಗಿದ ಬಳಿಕ ಕಾಲೇಜಿನ ಸಭಾಂಗಣದಲ್ಲಿ ಕೋಟ ವಿದ್ಯಾ ಸಂಘ ಇದರ ಆಡಳಿತ ಮಂಡಳಿ ಮತ್ತು ವಿವೇಕ ವಿದ್ಯಾ ಸಂಸ್ಥೆಗಳ ಅಧ್ಯಾಪಕರ ಕೂಡುವಿಕೆಯಲ್ಲಿ ವಾಲಿ ಮೋಕ್ಷ ಎಂಬ ಆಖ್ಯಾನದ ಯಕ್ಷಗಾನ ತಾಳಮದ್ದಲೆ ಜರುಗಿತು. ಹಿಮ್ಮೇಳದಲ್ಲಿ ಭಾಗವತರಾಗಿ ಕನ್ನಡ ಉಪನ್ಯಾಸಕರಾದ ಶ್ರೀ ಸದಾಶಿವ ಹೊಳ್ಳ, ಮದ್ದಲೆ ಗಾರರಾಗಿ ವಿವೇಕದ ಹಿಂದಿನ ವಿದ್ಯಾರ್ಥಿ ಲೋಹಿತ್ ಕೊಮೆ, ಚಂಡೆ ವಾದಕರಾಗಿ  ಪ್ರಸ್ತುತ ವಿದ್ಯಾರ್ಥಿ ಶ್ರೀ ವಾಗ್ವಿಲಾಸ್ ಭಟ್ ಭಾಗವಹಿಸಿದ್ದರು. ಮುಮ್ಮೇಳ ದಲ್ಲಿ ಅರ್ಥದಾರಿಗಳಾಗಿ, ಆಡಳಿತ ಮಂಡಳಿ ಯ ಕಾರ್ಯದರ್ಶಿ  ಎಂ ,ರಾಮದೇವ  ಐತಾಳ್ , ವಾಲಿ ಪಾತ್ರಧಾರಿಯಾಗಿ, ಗಣಿತ ಉಪನ್ಯಾಸಕ ಶ್ರೀ ಪ್ರಶಾಂತ್ ಬೇಳೂರು ಸುಗ್ರೀವನಾಗಿ,  ಹಿಂದಿ ಉಪನ್ಯಾಸಕ ಶ್ರೀ ಚಂದ್ರಶೇಖರ್ ಹೆಚ್ ಎಸ್, ಶ್ರೀ ರಾಮನಾಗಿ, ಆಂಗ್ಲ ಭಾಷೆ ಉಪನ್ಯಾಸಕ ಶ್ರೀ ಶಿವಪ್ರಸಾದ್ ಶೆಟ್ಟಿಗಾರ್ ತಾರೆಯಾಗಿ ಪಾತ್ರ ನಿರ್ವಹಿಸಿದರು. ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ಮೂಡಿಬಂದು ಪ್ರೇಕ್ಷಕರ ಮನ ಗೆದ್ದಿತು, ಆಡಳಿತ ಮಂಡಳಿಅಧ್ಯಕ್ಷರಾದ ಶ್ರೀ ಪ್ರಭಾಕರ ಮಯ್ಯ ರು ಭಾಗವಹಿಸಿದ ಕಲಾವಿದರಿಗೆ ಸ್ಮರಣಿಕೆ ಯೆನ್ನು ವಿತರಿಸಿದರು.

Explore More

Stay Connected With Child's Learning

Download the Parent App now!

contact info

Social Media Link

[mc4wp_form id=1143]

Copyright© 2025 Kota Vidya Sangha (R.) Kota   |   Powered By D-apps, Kumbashi  |   Privacy Policy